Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:3
22 ತಿಳಿವುಗಳ ಹೋಲಿಕೆ  

“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.


ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.


ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು