Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:4
27 ತಿಳಿವುಗಳ ಹೋಲಿಕೆ  

ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ.


ಎದೋಮ್ ಎಂಬ ಏಸಾವನ ವಂಶಾವಳಿ ಇದು:


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.


ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?


“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?


ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.


ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:


ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.


ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.


ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.


ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.


“ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.


ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.


ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು