Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:9
19 ತಿಳಿವುಗಳ ಹೋಲಿಕೆ  

ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.


ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


“ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”


ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.


ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.


ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು