Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ರಾತ್ರಿಯಲ್ಲಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು - ನೀನು ಆ ಸ್ತ್ರೀಯನ್ನು ಸೇರಿಸಿಕೊಂಡದರಿಂದ ಸಾಯತಕ್ಕವನಾಗಿದ್ದಿ; ಆಕೆ ಮುತ್ತೈದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:3
22 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.


ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,


ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.


ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.


ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.


ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.


ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?


ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,


ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,


ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.


ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು