ಆದಿಕಾಂಡ 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.
7 ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.
7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.
7 ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
7 ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.
ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು
ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.