Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:15
9 ತಿಳಿವುಗಳ ಹೋಲಿಕೆ  

ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.


ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.


ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.


ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು