Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಗೆ ಬರುತ್ತೇವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಸೇವಕರಿಗೆ - ನೀವು ಇಲ್ಲೇ ಕತ್ತೆಯ ಬಳಿಯಲ್ಲಿರ್ರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ತಿರಿಗಿ ಬರುತ್ತೇವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಬ್ರಹಾಮನು ತನ್ನ ಸೇವಕರಿಗೆ, “ಕತ್ತೆಯ ಸಂಗಡ ಇಲ್ಲಿಯೇ ಇರಿ. ನಾನೂ, ಹುಡುಗನೂ ಅಲ್ಲಿಗೆ ಹೋಗಿ, ಆರಾಧನೆ ಮಾಡಿ, ನಿಮ್ಮ ಬಳಿಗೆ ಹಿಂದಿರುಗಿ ಬರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:5
6 ತಿಳಿವುಗಳ ಹೋಲಿಕೆ  

ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,


ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.


ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು