Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಗಲ್ಲ ಸ್ವಾಮೀ, ನನ್ನ ಮಾತನ್ನು ಲಾಲಿಸು. ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ಸುಮ್ಮನೆ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ತೀರಿಹೋದ ನಿನ್ನ ಪತ್ನಿಗೆ ಅದರಲ್ಲಿ ಸಮಾಧಿಮಾಡಬಹುದು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:11
15 ತಿಳಿವುಗಳ ಹೋಲಿಕೆ  

ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.


ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.


ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ;


ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.


ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.


ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.


ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.


“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು


ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು