Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವದನ್ನು ಕೇಳು; ಆ ಭೂವಿುಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:13
10 ತಿಳಿವುಗಳ ಹೋಲಿಕೆ  

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.


ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ


ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,


ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು