Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಜಮೀನು, ಅದಕ್ಕೆ ಸೇರಿದ ಗವಿ, ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿದ್ದ ಮರಗಳು, ಇವೆಲ್ಲವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂವಿುಯು, ಅದಕ್ಕೆ ಸೇರಿದ ಗವಿಯೂ ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳೂ ಸಹಿತವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:17
14 ತಿಳಿವುಗಳ ಹೋಲಿಕೆ  

ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.


ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.


ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.


ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.


ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.


ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು