Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:12
29 ತಿಳಿವುಗಳ ಹೋಲಿಕೆ  

“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು.


“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.


ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ಯೆಹೋವನೇ, ದಯವಿಟ್ಟು ರಕ್ಷಿಸು; ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.


ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.


ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,


ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,


ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು.


ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು