Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ವಿುದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:2
16 ತಿಳಿವುಗಳ ಹೋಲಿಕೆ  

ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,


ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.


“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.


ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.


ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.


ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.


ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು