Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು - ಹೀಗಾದರೆ ನಾನು ಯಾಕೆ ಬದುಕಬೇಕು ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:22
7 ತಿಳಿವುಗಳ ಹೋಲಿಕೆ  

(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)


ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.


ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು