Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:23
33 ತಿಳಿವುಗಳ ಹೋಲಿಕೆ  

ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.


ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.


ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:


ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.


ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.


“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,


ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,


ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.


ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.


ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.


ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.


ದಾವೀದನೇ ಎಲ್ಲರಿಗಿಂತಲೂ ಕಿರಿಯನು. ಮೂರು ಮಂದಿ ಹಿರಿ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದ್ದರಿಂದ


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು