Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಎದ್ದುಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ, ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಅವನು ತಿಂದು, ಕುಡಿದು ಎದ್ದು ಹೋದನು. ಹೀಗೆ ಏಸಾವನು ತನ್ನ ಜೇಷ್ಠ ಪುತ್ರನ ಹಕ್ಕನ್ನು ತಾತ್ಸಾರದಿಂದ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:34
15 ತಿಳಿವುಗಳ ಹೋಲಿಕೆ  

ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.


ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;


ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.


ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;


ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.


ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.


ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು