Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:8
27 ತಿಳಿವುಗಳ ಹೋಲಿಕೆ  

ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.


ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.


ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.


ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.


ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.


ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.


“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.


ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, “ಬೆನೋನಿ” ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, “ಬೆನ್ಯಾಮೀನ” ಎಂದು ಹೆಸರಿಟ್ಟನು.


ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.


ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.


ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.


ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.


ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು