Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:24
41 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.


ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.


“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.


ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.


ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.


ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.


ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು