Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:25
11 ತಿಳಿವುಗಳ ಹೋಲಿಕೆ  

ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.


ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.


ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು