Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾವು ನಿನಗೆ ಯಾವ ಕೇಡನ್ನು ಮಾಡದೆ ಒಳ್ಳೆಯದನ್ನೇ ಮಾಡಿ ಸಮಾಧಾನದಿಂದ ಕಳುಹಿಸಿಕೊಟ್ಟಿಲ್ಲವೆ? ಅದರಂತೆಯೆ ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದ ನೀನು ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣ ಮಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದೊಡನೆ ಕಳುಹಿಸಿದೆವಲ್ಲಾ; ಅದರಂತೆ ನೀನು ನಮಗೆ ಕೇಡನ್ನು ಮಾಡುವದಿಲ್ಲವೆಂಬದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಷ್ಟೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದೇನೆಂದರೆ, ನಾವು ನಿನ್ನನ್ನು ಮುಟ್ಟದೆ, ನಿನಗೆ ಒಳ್ಳೆಯದನ್ನೇ ಮಾಡಿ, ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು. ಏಕೆಂದರೆ ನೀನು ಈಗ ಯೆಹೋವ ದೇವರಿಂದ ಆಶೀರ್ವಾದ ಹೊಂದಿರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:29
8 ತಿಳಿವುಗಳ ಹೋಲಿಕೆ  

ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.


ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು