Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದುದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನ ಅಣ್ಣ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನಣ್ಣನಾದ ಲಾಬಾನನ ಬಳಿಗೆ ಓಡಿಹೋಗಿ ಕೆಲವು ಕಾಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದ್ದರಿಂದ ಮಗನೇ, ನಾನು ಹೇಳಿದಂತೆ ಮಾಡು. ನನ್ನ ಅಣ್ಣನಾದ ಲಾಬಾನನು ಹಾರಾನಿನಲ್ಲಿ ವಾಸವಾಗಿದ್ದಾನೆ. ಅವನ ಬಳಿಗೆ ಹೋಗಿ ಅಡಗಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದ್ದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು. ಎದ್ದು ಹಾರಾನಿನಲ್ಲಿರುವ ನನ್ನ ಸಹೋದರ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:43
14 ತಿಳಿವುಗಳ ಹೋಲಿಕೆ  

ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.


ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.


ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.


ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.


ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.


ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.


ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು