Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:12
24 ತಿಳಿವುಗಳ ಹೋಲಿಕೆ  

ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.


ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು