Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ - ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:17
16 ತಿಳಿವುಗಳ ಹೋಲಿಕೆ  

ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.


ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.


ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.


ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.


ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.


ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು