Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಲೇಯಳು ಯಾಕೋಬನಿಗೆ ಅಲಕ್ಷ್ಯವಾದಳೆಂದು ಯೆಹೋವನು ನೋಡಿ ಆಕೆಯನ್ನು ಬಸುರಾಗುವಂತೆ ಮಾಡಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:31
26 ತಿಳಿವುಗಳ ಹೋಲಿಕೆ  

ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.


ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,


ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.


“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.


ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;


ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.


ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”


ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.


ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.


ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು