Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:13
15 ತಿಳಿವುಗಳ ಹೋಲಿಕೆ  

ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.


ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,


“ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?


ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,


ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.


ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.


ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು.


ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?


ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.


ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.


ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು