Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:18
20 ತಿಳಿವುಗಳ ಹೋಲಿಕೆ  

ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.


ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.


ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.


ಗೋದಿಗೆ ಬದಲಾಗಿ ಮುಳ್ಳುಗಳೂ, ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ.” ಎಂದನು. ಹೀಗೆ ಯೋಬನ ಮಾತುಗಳು ಮುಗಿದವು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.


ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.


ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.


ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು