Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ಉತ್ಪತ್ತಿಯಾದ ಭೂವಿುಯನ್ನೇ ವ್ಯವಸಾಯ ಮಾಡುವದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:23
10 ತಿಳಿವುಗಳ ಹೋಲಿಕೆ  

ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.


ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.


ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.


ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.


ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.


ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.


ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು