Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:8
20 ತಿಳಿವುಗಳ ಹೋಲಿಕೆ  

ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.


ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.


ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ,


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ.


ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.


ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು