Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಆಕೆಯ ಮೇಲೆ ಕೋಪಗೊಂಡು - ದೇವರು ನಿನಗೆ ಮಕ್ಕಳನ್ನು ಕೊಡದೆಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೋಬನಿಗೆ ರಾಹೇಲಳ ಮೇಲೆ ಕೋಪವಾಯಿತು. ಅವನು ಆಕೆಗೆ, “ನಾನು ದೇವರಲ್ಲ. ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:2
17 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.


ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?


“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.


ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?


ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.


ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು