Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇನ್ನು ಮೇಲೆ ನೀವು ಬಂದು ನನ್ನವುಗಳನ್ನು ಪರೀಕ್ಷಿಸುವಾಗ ನಾನು ಪ್ರಮಾಣಿಕನೋ ಇಲ್ಲವೋ ಎಂಬುದು ಪ್ರತ್ಯಕ್ಷವಾಗುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆ ಇಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನವುಗಳಲ್ಲಿ ಸಿಕ್ಕಿದರೆ, ಅದನ್ನು ಕದ್ದು ತಂದದ್ದೆಂದು ಎಣಿಸಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀನು ಇನ್ನು ಮೇಲೆ ಬಂದು ನಾನು ಪಡೆದದ್ದನ್ನು ಪರೀಕ್ಷಿಸುವಾಗ ನಾನು ಪ್ರಾಮಾಣಿಕನೋ ಅಪ್ರಾಮಾಣಿಕನೋ ಎಂಬದು ಪ್ರತ್ಯಕ್ಷವಾಗುವದು. ಆಡುಗಳಲ್ಲಿ ಚುಕ್ಕೆ ಮಚ್ಚೆಯಿಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ, ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿಕೊಡುವುದು. ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳು ನನ್ನ ಬಳಿಯಲ್ಲಿದ್ದರೆ, ಅವು ಕದ್ದವುಗಳು ಎಂದು ಎಣಿಕೆಯಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:33
8 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.


ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.


ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.


ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು