Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಈ ಪ್ರಕಾರ ಯಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ಹಿಂಡುಗಳು ಮಾತ್ರವಲ್ಲ ದಾಸದಾಸಿಯರೂ ಒಂಟೆ ಕತ್ತೆಗಳೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯಾಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ದೊಡ್ಡ ಹಿಂಡುಗಳೂ ದಾಸದಾಸಿಯರೂ ಒಂಟೆಕತ್ತೆಗಳೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದ್ದರಿಂದ, ಬಹು ಕುರಿಗಳೂ ದಾಸದಾಸಿಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:43
18 ತಿಳಿವುಗಳ ಹೋಲಿಕೆ  

ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.


ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.


ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.


ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.


ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.


ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.


ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.


ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,


ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.


“ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.


ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.


ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು