Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಲಾಬಾನನು ಯಾಕೋಬನಿಗೆ - ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಓಡಿ ಬಂದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಲಾಬಾನನು ಯಾಕೋಬನಿಗೆ, “ನೀನು ನನಗೇಕೆ ಮೋಸ ಮಾಡಿದೆ? ಯುದ್ಧದಲ್ಲಿ ಸೆರೆ ಒಯ್ಯುವ ಸ್ತ್ರೀಯರಂತೆ, ನೀನು ನನ್ನ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲಾಬಾನನು ಯಾಕೋಬನಿಗೆ, “ನೀನು ಏನು ಮಾಡಿದೆ? ನನಗೆ ತಿಳಿಸದೆ ಮೋಸಮಾಡಿದ್ದೀಯೆ ಮತ್ತು ನನ್ನ ಪುತ್ರಿಯರನ್ನು ಯುದ್ಧದಲ್ಲಿ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಹೋದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:26
17 ತಿಳಿವುಗಳ ಹೋಲಿಕೆ  

ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.


ಆಗ ದಾವೀದನು, “ನಾನೇನು ತಪ್ಪು ಮಾಡಿದೆನು? ಸುಮ್ಮನೆ ಮಾತನಾಡಿದೆನಷ್ಟೆ” ಎಂದು ಹೇಳಿ


ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದಿ, ಹೇಳು” ಎಂದು ಕೇಳಲು ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ” ಎಂದು ಉತ್ತರಕೊಟ್ಟನು.


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.


ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?


ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು.


ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”


ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?


ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.


ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.


ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.


ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,


ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.


ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.


ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು