Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:29
19 ತಿಳಿವುಗಳ ಹೋಲಿಕೆ  

ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.


ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ


ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;


ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.


ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು