Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ. ನಮ್ಮ ಬಂಧುಗಳ ಎದುರಾಗಿ ನನ್ನ ಸೊತ್ತನ್ನು ಪರೀಕ್ಷಿಸಬಹುದು; ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳು ಸಿಕ್ಕುವುವೋ ಅವರು ಸಾಯಲಿ. ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ, ನಮ್ಮ ಬಂಧುಗಳ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ,” ಎಂದನು. ಆದರೆ ರಾಹೇಲಳು ಅವುಗಳನ್ನು ಕದ್ದುಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:32
13 ತಿಳಿವುಗಳ ಹೋಲಿಕೆ  

ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.


“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.


ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.


ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.


ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು