Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಕಾಡುಮೃಗಗಳು ಕೊಂದ ಪಶುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ಬದಲುಕೊಟ್ಟೆನು; ಹಗಲಾಗಲಿ ಇರುಳಾಗಲಿ ಕದ್ದುಹೋದದ್ದರ ಲೆಕ್ಕವನ್ನು ನನ್ನಿಂದಲೇ ತೆಗೆದುಕೊಂಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಮೃಗಗಳಿಂದ ಘಾಯವಾದವುಗಳನ್ನು ನಿನ್ನ ಬಳಿಗೆ ತಾರದೆ, ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ, ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:39
9 ತಿಳಿವುಗಳ ಹೋಲಿಕೆ  

ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,


ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.


“ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.


ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.


ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು