Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಕುಪ್ಪೆಯೇ ಸಾಕ್ಷಿ ಎಂದು ಹೇಳಿದ್ದರಿಂದ ಅದಕ್ಕೆ ಗಲೇದೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:48
10 ತಿಳಿವುಗಳ ಹೋಲಿಕೆ  

ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ


(ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.


ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.


ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.


ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.


ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.


ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು