Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಬೆಳಿಗ್ಗೆ ಲಾಬಾನನು ಎದ್ದು, ತನ್ನ ಪುತ್ರಿಯರಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು, ಆಶೀರ್ವದಿಸಿ, ತನ್ನ ಊರಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಬೆಳಿಗ್ಗೆ ಲಾಬಾನನು ಎದ್ದು ತನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಊರಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಮರುದಿನ ಮುಂಜಾನೆ ಲಾಬಾನನು ತನ್ನ ಮೊಮ್ಮಕ್ಕಳಿಗೂ ಹೆಣ್ಣುಮಕ್ಕಳಿಗೂ ಮುದ್ದಿಟ್ಟು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:55
18 ತಿಳಿವುಗಳ ಹೋಲಿಕೆ  

ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.


ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, “ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.


ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.


ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.


ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.


ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?


ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?


ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.


ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.


ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು