Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:20
14 ತಿಳಿವುಗಳ ಹೋಲಿಕೆ  

ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.


ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.


ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.


ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು