Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:31
19 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.


ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.


ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು.


ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.


ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.


ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.


“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.


ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.


ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು