Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:7
22 ತಿಳಿವುಗಳ ಹೋಲಿಕೆ  

ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.


ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.


ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.


ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.


ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.


ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು