Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:11
21 ತಿಳಿವುಗಳ ಹೋಲಿಕೆ  

ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.


ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.


ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,


ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.


ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.


ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.


ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.


ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.


ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.


ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು.


ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು