Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:15
8 ತಿಳಿವುಗಳ ಹೋಲಿಕೆ  

ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.


ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.


ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.


ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.


ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.


ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು.


ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.


ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು