Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಯೌವನಸ್ಥನು ಯಾಕೋಬನ ಮಗಳಲ್ಲಿ ಅನುರಕ್ತನಾಗಿದ್ದದರಿಂದ ಅವರು ಹೇಳಿದಂತೆ ಮಾಡುವದಕ್ಕೆ ತಡೆಮಾಡಲಿಲ್ಲ. ಅವನೇ ತನ್ನ ತಂದೆಯ ಮನೆಯವರೆಲ್ಲರಲ್ಲಿ ಘನವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:19
15 ತಿಳಿವುಗಳ ಹೋಲಿಕೆ  

ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.


ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.


ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?


ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.


ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.


ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.


ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.


ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು