Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಥೆಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಕೂಡಿ ಇಸ್ರಾಯೇಲ್ಯರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ನಡಿಸಿದನು; ಅದು ಆಗಬಾರದ ಕಾರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೊಲದಲ್ಲಿದ್ದ ಯಾಕೋಬನ ಗಂಡುಮಕ್ಕಳು ನಡೆದ ಸಂಗತಿಯನ್ನು ಕೇಳಿ ತುಂಬ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳನ್ನು ಮಾನಭಂಗ ಮಾಡಿ ಇಸ್ರೇಲರಿಗೆ ಅವಮಾನ ಮಾಡಿದ್ದರಿಂದ ಅವರು ಆವೇಶಗೊಂಡರು. ಶೆಕೆಮನು ತುಂಬ ಕೆಟ್ಟದ್ದನ್ನು ಮಾಡಿದ್ದರಿಂದ ಅಣ್ಣಂದಿರು ಹೊಲದಿಂದ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:7
27 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,


ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.


ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.


ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.


ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.


ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.


“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


“‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.


ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.


ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.


ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು