Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:11
30 ತಿಳಿವುಗಳ ಹೋಲಿಕೆ  

ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.


ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.


“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.


ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.


“ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,


ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:


ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.


ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.


ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು