Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋಗಲು ದೇವರು ಅಲ್ಲೇ ಅವನಿಗೆ ಪ್ರತ್ಯಕ್ಷನಾದದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:7
16 ತಿಳಿವುಗಳ ಹೋಲಿಕೆ  

ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.


ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.


ಇದಲ್ಲದೆ ಅವನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.


ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.


ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.


ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.


ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.


ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು