Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:14
22 ತಿಳಿವುಗಳ ಹೋಲಿಕೆ  

ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.


ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.


ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.


ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.


ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.


ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.


ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.


ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.


ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.


ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ


ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.


ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.


ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು