Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ ದುಷ್ಟಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ ಬನ್ನಿ; ಆಗ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:20
25 ತಿಳಿವುಗಳ ಹೋಲಿಕೆ  

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.


ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.


ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.


ಅವರು ಒಬ್ಬರಿಗೊಬ್ಬರು, “ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ


ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?


ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.


ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.


ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.


ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು