Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಕ್ತಪಾತ ಕೂಡದು, ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ,” ಎಂದು ಅವನಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ದಿಸಬೇಕೆಂಬ ಗುರಿ ರೂಬೇನನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರಿಗಿ ಒಪ್ಪಿಸಬೇಕೆಂದು ಅವರಿಗೆ - ಪ್ರಾಣಹತ್ಯ ಮಾಡಬೇಡಿರಿ; ಅವನನ್ನು ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಬಹುದು; ಅವನ ಮೇಲೆ ಕೈಹಾಕಬೇಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅರಣ್ಯದಲ್ಲಿರುವ ಬರಿದಾದ ಬಾವಿಗೆ ಅವನನ್ನು ನೂಕಿಬಿಡಿ; ಆದರೆ ಅವನಿಗೆ ನೋವು ಮಾಡಬೇಡಿ” ಎಂದು ಹೇಳಿದನು. ತರುವಾಯ ಯೋಸೇಫನನ್ನು ಬಾವಿಯಿಂದ ಮೇಲೆತ್ತಿ ತಂದೆಗೆ ಅವನನ್ನು ಒಪ್ಪಿಸಬೇಕೆಂಬುದೇ ರೂಬೇನನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:22
9 ತಿಳಿವುಗಳ ಹೋಲಿಕೆ  

ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.


ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.


ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.


ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.


ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.


ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು