Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಮೇಲೆ ಅವರು ಊಟಕ್ಕೆ ಕೂತುಕೊಂಡರು. ಅಷ್ಟರಲ್ಲಿ ಅವರು ಕಣ್ಣೆತ್ತಿ ನೋಡಿ ಇಷ್ಮಾಯೇಲ್ಯರ ಗುಂಪು ಒಂಟೆಗಳ ಮೇಲೆ ಹಾಲುಮಡ್ಡಿ, ಸುಗಂಧತೈಲ, ರಕ್ತಬೋಳ ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:25
22 ತಿಳಿವುಗಳ ಹೋಲಿಕೆ  

ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.


ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.


ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.


ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.


ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.


ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.


ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,


ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.


“ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು