Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೂದನು ತನ್ನ ಅಣ್ಣತಮ್ಮಂದಿರಿಗೆ - ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಅವನ ಮರಣವನ್ನು ಮರೆಮಾಡಿದರೆ ನಮಗಾಗುವ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:26
16 ತಿಳಿವುಗಳ ಹೋಲಿಕೆ  

ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?


ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ! ನನ್ನ ಮೊರೆಗೆ ಬಿಡುವು ಸಿಕ್ಕದಿರಲಿ!


ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.


ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.


ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.


ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು